ಕರ್ನಾಟಕವನ್ನಾಳಿದ ಪ್ರಮುಖ ರಾಜಮನೆತನಗಳು

 

೧) ಮೌರ್ಯರು


* ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ಸಾರುತ್ತವೆ. ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ 11 ಸ್ಥಳಗಳಲ್ಲಿ ಕಂಡು ಬಂದಿವೆ.
* ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.
* ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು : ಸುವರ್ಣಗಿರಿ, ಇಸಿಲ, ತೊಸಿಲ, ಸಂಪ.
* ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು :
* ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ.ರಾಮೇಶ್ವರ.
* ರಾಯಚೂರು ಜಿಲ್ಲೆಯ ಗವಿಮಠ,ಮಾಸ್ಕಿ, ಪಾಲ್ಕಿಗುಂಡು, ಕೊಪ್ಪಳ.
* ಗುಲ್ಬರ್ಗಾ ಜಿಲ್ಲೆಯ ಸನ್ನತಿ.
* ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದೇಗೊಳ್ಳಂ

೨) ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225)


* ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, (ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.
* ಇವರ ರಾಜಧಾನಿ : ಪೈತಾನ್ ಅಥವಾ ಪ್ರತಿಷ್ಠಾನ.
* ಇವರ ಲಾಂಛನ : ವರುಣ.
* ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.
* ಶಾತವಾಹನರ ಮೂಲ ಪುರುಷ : ಸಿಮುಖ.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ
* ಶಾತವಾಹನರನ್ನು ' ಶಾತಕರ್ಣಿಗಳೆಂದು' ಕರೆಯುತ್ತಾರೆ.

೩) ಬನವಾಸಿಯ ಕದಂಬರು (ಕ್ರಿ.ಶ 345 - 540)


* ಈ ಸಂತತಿಯ ಸ್ಥಾಪಕ :ಮಯೂರವರ್ಮ (ಮಯೂರಶರ್ಮ) (345-360)
* ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ)
* ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.
* ಇವರ ಲಾಂಛನ : ಸಿಂಹ.
* ಕದಂಬರಲ್ಲಿ ಹಾನಗಲ್, ಚಂದಾವರ, ಗೋವೇ ಕದಂಬ ರೆಂದು ಮೂರು ಶಾಖೆಗಳಿದ್ದವು.
* ಕದಂಬರ ಮೂಲದ ಬಗ್ಗೆ 'ಶಾಂತಿವರ್ಮನ ತಾಳಗುಂದ ಶಾಸನ' ತಿಳಿಸುತ್ತದೆ.
* ಕನ್ನಡದ ಪ್ರಪ್ರಥಮ ಶಾಸನ - ಕಾಕುತ್ಸವರ್ಮನ ಹಲ್ಮಿಡಿ ಶಾಸನ.

೪) ತಲಕಾಡಿನ ಗಂಗರು (ಕ್ರಿ.ಶ 350- 999)


* ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು.
* ಈ ಸಂತತಿಯ ಮೊದಲ ದೊರೆ : ದಡಿಗ (350 -400)
* ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ
* ಇವರ ಎರಡನೆಯ ರಾಜಧಾನಿ : ತಲಕಾಡು
* ತಲಕಾಡಿನ ಮತ್ತೊಂದು ಹೆಸರು : ತಲವನಪುರ.
* ಇವರ ಮೂರನೇ ರಾಜಧಾನಿ : ಚೆನ್ನಪಟ್ಟಣ ಬಳಿಯ ಮಾಕುಂದ
* ಇವರ ಲಾಂಛನ : ಆನೆ(ಮದಗಜ)
* ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ದುರ್ವಿನೀತ (540-600)
* ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.
* ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು.

೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757)


* ಈ ಸಂತತಿಯ ಸ್ಥಾಪಕ : ಜಯಸಿಂಹ
* ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ)
* ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ಇಮ್ಮಡಿ ಪುಲಕೇಶಿ (609-642)
* ಇವರ ರಾಜ ಲಾಂಛನ : ವರಹ.
* ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್.
* ಬಾದಾಮಿಯ ಚಾಲುಕ್ಯರ ನಿರ್ಮಿತ ಐಹೊಳೆಯನ್ನು 'ಭಾರತೀಯ ದೇವಾಲಯದ ವಾಸ್ತುಶಿಲ್ಪದ ತೊಟ್ಟಿಲು ' ಎನ್ನುವರು.

೬) ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 - 540)


* ಈ ಸಂತತಿಯ ಸ್ಥಾಪಕ : ದಂತಿದುರ್ಗ
* ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.
* ಇವರ ಲಾಂಛನ : ಗರುಡ
* ಈ ಸಂತತಿಯ ಅತ್ಯಂತ ಹೆಸರಾಂತ ದೊರೆ :ಅಮೋಘವರ್ಷ ನೃಪತುಂಗ (814-878)
* ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು.

೭) ಕಲ್ಯಾಣದ ಚಾಲುಕ್ಯರು (ಕ್ರಿ.ಶ 973-1156 ಹಾಗೂ 1183-1200)


* ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ
* ಇವರ ರಾಜಧಾನಿ : ಕಲ್ಯಾಣ
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : 6ನೇ ವಿಕ್ರಮಾದಿತ್ಯ (1076-1126)
* 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200 ರವರೆಗೆ ರಾಜ್ಯಭಾರ ನಡೆಸಿದರು.

೮) ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 - 1183)


* ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು.
* ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.

೯) ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 - 1346)


* ಈ ಸಂತತಿಯ ಮೂಲ ಪುರುಷ : ಸಳ.
* ಇವರ ರಾಜಧಾನಿ : ಹಳೇಬೀಡು ಅಥವಾ ದ್ವಾರಸಮುದ್ರವಾಗಿತ್ತು.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152)
* ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.

೧೦) ವಿಜಯನಗರ ಸಾಮ್ರಾಜ್ಯ (ಕ್ರಿ.ಶ 1336 - 1565)


* ವಿದ್ಯಾರಣ್ಯರ ಸಹಾಯದಿಂದ ಹಕ್ಕ -ಬುಕ್ಕ ಸಹೋದರರಿಂದ ಸ್ಥಾಪಿತವಾದ ಈ ಸಾಮ್ರಾಜ್ಯವನ್ನು ಹಲವಾರು ಸಂತತಿಯ ರಾಜರು ವೈಭವದಿಂದ ಆಳಿದರು.
* ಇವರ ರಾಜಧಾನಿ : ಹಂಪಿ
* ತುಳುವ ಸಂತತಿಯ ಕೃಷ್ಣದೇವರಾಯ (1519 - 1529) ವಿಜಯನಗರ ಸಾಮ್ರಾಜ್ಯದ ಅತ್ಯಂತ ಪ್ರಬಲ ಹಾಗೂ ಖ್ಯಾತ ದೊರೆ.
* 1565 ರ ತಾಳೀಕೋಟೆ ಯುದ್ಧದಿಂದ ವಿಜಯನಗರ ಸಾಮ್ರಾಜ್ಯ ಪತನವಾಯಿತು.

೧೧) ಬಹಮನಿ ಸಾಮ್ರಾಜ್ಯ (ಕ್ರಿ.ಶ 1347 - 1527)


* ಈ ಬಹಮನಿ ಸಾಮ್ರಾಜ್ಯದ ಸ್ಥಾಪಕ: ಅಲ್ಲಾವುದ್ದೀನ್ ಹಸನ್ ಬಹಮನ್ ಷಾ.
* ಈ ಮುಸ್ಲಿಂ ಸಾಮ್ರಾಜ್ಯದ ರಾಜಧಾನಿಗಳು : ಗುಲ್ಬರ್ಗಾ ಹಾಗೂ ಬೀದರ್.

Contributed By:Spardhaloka